Home » ಮುಂಗಾರು ಹಂಗಾಮಿನ ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆ: ವಿಮಾ ಕಂತು ಪಾವತಿಗೆ ಜೂ.30 ಕೊನೆ

ಮುಂಗಾರು ಹಂಗಾಮಿನ ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆ: ವಿಮಾ ಕಂತು ಪಾವತಿಗೆ ಜೂ.30 ಕೊನೆ

by manager manager

2021-22ನೇ ಸಾಲಿನ ಮುಂಗಾರು ಹಂಗಾಮಿಗಾಗಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಕಲಬುರಗಿ ಜಿಲ್ಲೆಯ ರೈತರಿಗೆ ಸರ್ಕಾರವು ಘೋಷಿಸಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ತೋಟಗಾರಿಕೆ ಬೆಳೆಗಳಾದ ಪಪ್ಪಾಯ ಹಾಗೂ ಹಸಿರು ಮೆಣಸಿನಕಾಯಿ (ನೀರಾವರಿ) ಬೆಳೆಗಳನ್ನು ಈ ಯೋಜನೆಯ ವಿಮೆ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂದು ಕಲಬುರಗಿ (ಜಿ.ಪಂ.) ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಗೆ ಹೆಚ್‍ಡಿಎಫ್‍ಸಿ ಇಆರ್‍ಜಿಓ (HDFC ERGO) ವಿಮಾ ಕಂಪನಿಯು ಆಯ್ಕೆಯಾಗಿದ್ದು, ಹಸಿರು ಮೆಣಸಿನಕಾಯಿ (ನೀರಾವರಿ) ಬೆಳೆಗೆ 3550 ರೂ. ಹಾಗೂ ಪಪ್ಪಾಯ ಬೆಳೆಗೆ 6700 ರೂ. ಪ್ರತಿ ಹೇಕ್ಟೆರ್‍ಗೆ ರೈತರು ತಮ್ಮ ವಿಮೆ ಕಂತಿನ ಮೊತ್ತವನ್ನು ಪಾವತಿಸಬೇಕು. ರೈತರು (ಸಾಲ ಪಡೆದ ಮತ್ತು ಸಾಲ ಪಡೆಯದ) ವಿಮಾ ಕಂತು ಪಾವತಿಸಲು 2021ರ ಜೂನ್ 30 ಕೊನೆಯ ದಿನವಾಗಿದೆ.

ಈ ಯೋಜನೆಯ ಸದುಪಯೋಗ ಪಡೆಯಲು ಬೆಳೆ ಸಾಲ ಪಡೆಯದ ರೈತರು ತಮ್ಮ ಹತ್ತಿರದ ಬ್ಯಾಂಕುಗಳಿಗೆ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಆರ್‌ಟಿಸಿ (ಪಹಣಿ), ಆಧಾರ ಕಾರ್ಡ್, ಬ್ಯಾಂಕ್‌ ಪಾಸ್‍ಬುಕ್ ಹಾಗೂ ಸ್ವಯಂ ಘೋಷಿತ ಬೆಳೆ ಪ್ರಮಾಣ ಪತ್ರದೊಂದಿಗೆ ಭೇಟಿ ನೀಡಿ ಈ ಯೋಜನೆಯ ಸದುಪಯೋಗ ಪಡೆಯಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತಮ್ಮ ಸಮೀಪದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು, ಸ್ಥಳಿಯ ವಾಣಿಜ್ಯ/ಗ್ರಾಮೀಣ ಸಹಕಾರಿ ಬ್ಯಾಂಕ್‌ ಅಥವಾ ಹತ್ತಿರದ ಬ್ಯಾಂಕುಗಳ ಅಧಿಕಾರಿಗಳನ್ನು ಸಂಪರ್ಕಿಸಬೇಕು.

ಹವಾಮಾನ ಅಂಶಗಳಾದ ತಾಪಮಾನ, ಮಳೆಯ ಪ್ರಮಾಣ, ಇತ್ಯಾದಿ ಮಾಹಿತಿಗಳನ್ನು ಸ್ಥಳಿಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮಾ ನಷ್ಟವನ್ನು ತೀರ್ಮಾನಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಕೃಷಿ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

You may also like